ಮಂಗಳೂರು: ಪಿಎಫ್ಐ ಮತ್ತು ಎಸ್ಡಿಪಿಐ ಕಚೇರಿಗೆ ಎಎನ್ಐ ದಾಳಿ- ಕಾರ್ಯಕರ್ತರ ಪ್ರತಿಭಟನೆ

ಮಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್ ಐ ಎ ಅಧಿಕಾರಿಗಳ ತಂಡ ಮುಂಜಾನೆ ಸುಮಾರು 3.30 ರ ಸುಮಾರಿಗೆ ಮಂಗಳೂರು ಮತ್ತು ಬೆಂಗಳೂರಿನಲ್ಲಿರುವ ಎಸ್ ಡಿಪಿಐ ಹಾಗೂ ಪಿಎಫ್ ಐ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಎನ್‌ಐಎ ಅಧಿಕಾರಿಗಳು ಬಜ್ಜೆ, ಜೋಕಟ್ಟೆ, ಬೆಂಗಳೂರಿನಲ್ಲಿರುವ ಕಚೇರಿ ಸೇರಿದಂತೆ ಪಿಎಫ್‌ಐ ನಾಯಕರ ಮನೆ ಮೇಲೆ ದಾಳಿ ನಡೆಸಿ,ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಪಿಎಫ್ಐ ಮತ್ತು ಎಸ್ಡಿಪಿಐ ನಾಯಕರ ಮನೆ ಮುಂಭಾಗ ಪಿಎಫ್‌ಐ ಕಾರ್ಯಕರ್ತರು ಜಮಾಯಿಸಿದ್ದು, ಎನ್‌ಐಎ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!