ರಾಜ್ಯ ಪೊಲೀಸ್ ನಿರ್ದೇಶನ ಬಂಟ್ವಾಳದ ಮನೆಗೆ ತಡರಾತ್ರಿ ದಾಳಿ

ಬಂಟ್ವಾಳ, ಸೆ.22: ತಾಲೂಕಿನ ಬೋಳಂತೂರಿನಲ್ಲಿ ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ತಫ್ಸೀರ್ ಎಂಬವರ ಮನೆಗೆ ಇಂದು ಮುಂಜಾನೆ 3 ಗಂಟೆ ಸುಮಾರಿಗೆ  ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ದಾಳಿ ಮಾಡಿ ವಿಚಾರಣೆ ನಡೆಸಿ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದೆದಿ.

ಪ್ರಕರಣವೊಂದಕ್ಕೆ ಸಂಬಂಧಿಸಿ ರಾಜ್ಯ ಪೊಲೀಸ್ ನಿರ್ದೇಶನದಂತೆ ಈ ದಾಳಿ ನಡೆದಿದ್ದು, ತಫ್ಸೀರ್ ಅವರಿಗೆ ಸೇರಿದ ಹಳೆಯ ಮನೆ ಹಾಗೂ ಹೊಸ ಮನೆಗಳಿಗೆ ದಾಳಿ ನಡೆಸಿರುವ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದರೆನ್ನಲಾಗಿದೆ. ಆದರೆ ಯಾವ ಪ್ರಕರಣಕ್ಕೆ ಸಂಬಂಧಿಸಿ ಈ ಕಾರ್ಯಾಚರಣೆ ನಡೆದಿದೆ ಎಂಬ ವಿಚಾರವನ್ನು ಪೊಲೀಸರು ಬಹಿರಂಗಪಡಿಸಿಲ್ಲ. ವಿಚಾರಣೆಯ ದೃಷ್ಟಿಯಿಂದ ಗೌಪ್ಯತೆ ಕಾಪಾಡಲು ರಾಜ್ಯ ಪೊಲೀಸರ ನಿರ್ದೇಶನದಂತೆ ಅವರು ಮಾಹಿತಿ ನೀಡುತ್ತಿಲ್ಲ ಎಂಬ ವಿಚಾರ ತಿಳಿದುಬಂದಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ ಸ್ಪೆಕ್ಟರ್ ಟಿ.ಡಿ.ನಾಗರಾಜ್, ನಗರ ಠಾಣಾ ಪೊಲೀಸ್ ಇನ್ ಸ್ಪೆಕ್ಟರ್ ವಿವೇಕಾನಂದ, ವಿಟ್ಲ ಇನ್ ಸ್ಪೆಕ್ಟರ್ ನಾಗರಾಜ್ ಎಚ್., ನಗರ ಠಾಣಾ ಪೊಲೀಸ್ ಪಿಎಸ್ಸೈಗಳಾದ ಅವಿನಾಶ್, ಹರೀಶ್ ಸಹಿತ ಇಡೀ ಪೊಲೀಸ್ ತಂಡ ಇಲ್ಲಿ ಮೊಕ್ಕಾಂ ಇದ್ದು ಭದ್ರತೆ ಒದಗಿಸಿ ತನಿಖೆ ನಡೆಸುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ. 

Leave a Reply

Your email address will not be published. Required fields are marked *

error: Content is protected !!