ಉಡುಪಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಅಂಗನವಾಡಿ ಸ್ವಚ್ಚತೆ

ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮ ದಿನದ ಸೇವಾ ಸಪ್ತಾಹದ ಅಂಗವಾಗಿ, ಉಡುಪಿ ಜಿಲ್ಲಾಧ್ಯಕ್ಷರಾದ ಸುರೇಶ್ ನಾಯಕ್ ಕುಯಿಲಾಡಿಯವರ ಮಾರ್ಗದರ್ಶನದಲ್ಲಿ, ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ದಾವುದ್ ಅಬೂಬಕರ್ ನೇತ್ರತ್ವದಲ್ಲಿ ಕುಕ್ಕಿಕಟ್ಟೆ ಅಂಗನವಾಡಿ ಮೈದಾನದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಗಿಡಗಂಟಿಗಳಿಂದ ತುಂಬಿದ್ದ ಅಂಗನವಾಡಿಯ ಮೈದಾನ ಸ್ವಚ್ಚ ಸುಂದರಗೊಳಿಸುವ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ದಾವುದ್ ಅಬೂಬಕರ್, ಪ್ರಧಾನ ಕಾರ್ಯದರ್ಶಿಯವರಾದ ಆಲ್ವಿನ್ ಡಿಸೋಜ, ಉಪಾಧ್ಯಕ್ಷರುಗಳಾದ ರುಡಾಲ್ಫ್ ಡಿಸೋಜ, ಅಬ್ದುಲ್ ಖಾದರ್ ಇಂದಿರಾನಗರ, ಕಾರ್ಯದರ್ಶಿ ಮೈಕಲ್ ಡಿಸೋಜ ಚಿಟ್ಪಾಡಿ ಮತ್ತು ಕಾರ್ಯಕಾರಿಣಿ ಸದಸ್ಯರು ಹಾಗೂ ಉಡುಪಿ ನಗರ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಜುನೈದ್, ಉಡುಪಿ ನಗರ ಸಭಾ ಸದಸ್ಯರಾದ ಚಂದ್ರಶೇಖರ್ ಇಂದಿರಾನಗರ, ಮತ್ತು ಪ್ರಶಾಂತ್ ಬಾಬಾ ಇಂದಿರಾನಗರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!