ಕಲ್ಸಂಕ ವಾಹನ ದಟ್ಟಣೆ: ಫ್ರೀ ಲೆಫ್ಟ್’ಗೆ ಶಾಸಕ ರಘುಪತಿ ಭಟ್ ಅಧಿಕಾರಿಗಳಿಗೆ ಸೂಚನೆ

ಉಡುಪಿ ಸೆ.26(ಉಡುಪಿ ಟೈಮ್ಸ್ ವರದಿ): ನಗರದ ಕಲ್ಸಂಕ ಜಂಕ್ಷನ್ ಬಳಿ ವಾಹನ ದಟ್ಟಣೆ ಕಡಿಮೆ ಮಾಡಲು ಫ್ರೀ ಲೆಫ್ಟ್ ನಿರ್ಮಿಸಲು ಶಾಸಕ ರಘುಪತಿ ಭಟ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಕಲ್ಸಂಕ ಜಂಕ್ಷನ್ ಬಳಿ ಸ್ಥಳ ಪರಿಶೀಲನೆ ನಡೆಸಿದ ಅವರು ಮಾಂಡವಿ ಬಿಲ್ಡರ್ಸ್ ಸಹಕಾರ ದೊಂದಿಗೆ ಕಲ್ಸಂಕ ಜಂಕ್ಷನ್ ಬಳಿ ಫ್ರೀ ಲೆಫ್ಟ್ ನಿರ್ಮಿಸುವ ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ಫ್ರೀ ಲೆಫ್ಟ್ ನಿರ್ಮಾಣದಿಂದ ವಾಹನ ದಟ್ಟಣೆ ಕಡಿಮೆಯಾಗಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು, ಉಡುಪಿ ಸಂಚಾರಿ ಪೊಲೀಸ್ ಉಪ ನಿರೀಕ್ಷಕರಾದ ಖಾದರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!