ಹಕ್ಕಿ ಡಿಕ್ಕಿ ದೆಹಲಿಗೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ

ಕಣ್ಣೂರು ಸೆ.27: ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಕೋಝಿಕ್ಕೋಡ್‍ ನಿಂದ ದೆಹಲಿಗೆ ಹೊರಟಿದ್ದ ವಿಮಾನವನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ ಘಟನೆ ನಿನ್ನೆ ನಡೆದಿದೆ.

ವಿಮಾನದಲ್ಲಿ ದ್ದ 135 ಮಂದಿ ಪ್ರಯಾಣಿಕರಲ್ಲಿ 85 ಮಂದಿ ಕೋಝಿಕ್ಕೋಡ್‍ನವರು ಹಾಗೂ 50 ಮಂದಿ ಕಣ್ಣೂರಿನವರಾಗಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ನಿಲ್ದಾಣದ ಠಾಣಾಧಿಕಾರಿ ತಿಳಿಸಿದ್ದಾರೆ.

ಸಾಗರೋತ್ತರ ಪ್ರದೇಶಗಳಿಗೆ ತೆರಳಬೇಕಿದ್ದ ಪ್ರಯಾಣಿಕರಿಗೆ ಏರ್‍ಲೈನ್ಸ್ ಬೇರೆ ವಿಮಾನಗಳಲ್ಲಿ ವ್ಯವಸ್ಥೆ ಮಾಡಿದೆ. ದೆಹಲಿಗೆ ತೆರಳಬೇಕಿದ್ದ ಪ್ರಯಾಣಿಕರನ್ನು ಕಣ್ಣೂರಿನ ಎರಡು ಹೋಟೆಲ್‍ ಗಳಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದ್ದು, ಮಂಗಳವಾರ ಅವರ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು  ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಏರ್ ಇಂಡಿಯಾ ವಕ್ತಾರರು,ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಹಕ್ಕಿ ಡಿಕ್ಕಿ ಹೊಡೆಯಿತು. ಇದರ ಪರಿಣಾಮ ವಿಮಾನವನ್ನು ತಪಾಸಣೆ ಮತ್ತು ನಿರ್ವಹಣೆಗಾಗಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು  ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!