ಅ.2 ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆ

ಉಡುಪಿ ಸೆ.27(ಉಡುಪಿ ಟೈಮ್ಸ್ ವರದಿ):ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆ ಅ.2 ರಂದು ಬೆಳಿಗ್ಗೆ 10.30 ಕ್ಕೆ ಮೂಡಬಿದಿರೆ ಸಮಾಜ ಮಂದಿರದಲ್ಲಿ ನಡೆಯಲಿದೆ.

ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿದ ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ಅವರು, ಈ ಸಭೆಯಲ್ಲಿ ವಿವಿಧ ಕಂಬಳದ ದಿನಾಂಕಗಳನ್ನು ನಿರ್ಧರಿಸಲಾಗುವುದು. ಆದ್ದರಿಂದ ಕಂಬಳ ವ್ಯವಸ್ಥಾಪಕರು, ಕೋಣಗಳ ಯಜಮಾನರು, ತೀರ್ಪುಗಾರರು, ಓಟಗಾರರು, ಕಂಬಳ ಸಹಕಾರಿ ವರ್ಗದವರು ಭಾಗವಹಿಸುವಂತೆ ಸೂಚನೆ ನೀಡಿದ್ದಾರೆ. 

Leave a Reply

Your email address will not be published. Required fields are marked *

error: Content is protected !!