ಬೈಂದೂರು: ಇಸ್ಪೀಟು ಜುಗಾರಿ ಅಡ್ಡೆಗೆ ದಾಳಿ- ಐವರು ವಶಕ್ಕೆ

ಬೈಂದೂರು ಸೆ.29 (ಉಡುಪಿ ಟೈಮ್ಸ್ ವರದಿ): ತಾಲೂಕಿನ ಹೆರೂರು ಗ್ರಾಮದ ಚಿಕ್ತಾಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಇಸ್ಪೀಟು ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಬೈಂದೂರು ಪೊಲೀಸರು ಐದು ಮಂದಿಯನ್ನು ವಶಕ್ಕೆ ಪಡೆದು 21,800 ರೂ. ನಗದು ವಶಪಡಿಸಿಕೊಂಡಿದ್ದಾರೆ.

ಶ್ರೀನಿವಾಸ ದೇವಾಡಿಗ, ಉಪೇಂದ್ರ ಗಾಣಿಗ, ಬಾಬಣ್ಣ ಮೊಗವೀರ, ದುರ್ಗಾ ಪೂಜಾರಿ, ಪ್ರಶಾಂತ ಪೂಜಾರಿ ಪೊಲೀಸರು ವಶಕ್ಕೆ ಪಡೆದವರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಬೈಂದೂರು ಪೊಲೀಸರು ಬೈಂದೂರಿನ ಹೆರೂರು ಗ್ರಾಮದ ಚಿಕ್ತಾಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪದ ಸಾರ್ವಜನಿಕ ಸ್ಥಳಕ್ಕೆ ದಾಳಿ ನಡೆಸಿ ಪರಿಶೀಲಿಸಿದಾಗ ಕೆಲವರು ಸೇರಿಕೊಂಡು ಇಸ್ಪೀಟು ಜುಗಾರಿ ಆಡುತ್ತಿರುವುದು ಕಂಡು ಬಂದಿದೆ. ಈ ವೇಳೆ 5 ಮಂದಿಯಲ್ಲಿ ವಶಕ್ಕೆ ಪಡೆದು ಅವರ ಬಳಿ ಇದ್ದ 21,800 ರೂ. ನಗದು ಹಾಗೂ ಆಟಕ್ಕೆ ಬಳಸಿದ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!