ಸಂಪಿಗೆನಗರದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಕಾಪು ಸೆ.30 (ಉಡುಪಿ ಟೈಮ್ಸ್ ವರದಿ): ತಾಲ್ಲೂಕಿನ ಸಂಪಿಗೆನಗರದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇಲ್ಲಿನ ನಿವಾಸಿ ಶಂಕರ ಮರಕಾಲ (77) ಆತ್ಮಹತ್ಯೆ ಮಾಡಿಕೊಂಡವರು. ಇವರು ಸುಮಾರು 40 ವರ್ಷಗಳಿಂದ ತೀವ್ರವಾದ ತಲೆ ನೋವಿನಿಂದ ಬಳಲುತ್ತಿದ್ದು, ಇದಕ್ಕಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಅವರು ಇಂದು ಬೆಳಿಗ್ಗೆ ನೋಡುವಾಗ ಮನೆಯ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಈ ಬಗ್ಗೆ ಮೃತರ ಮಗ ಪ್ರವೀಣ ಎಂಬವರು ನೀಡಿದ ಮಾಹಿತಿಯಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ. ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ,ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್.ಎಸ್.ಆರ್ ಸೆಕ್ಟರ್- 4, ಬೆಂಗಳೂರು.