ಕಾರ್ಕಳ: ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮಹಿಳೆ ಮೃತ್ಯು

ಕಾರ್ಕಳ ಅ.1(ಉಡುಪಿ ಟೈಮ್ಸ್ ವರದಿ): ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡದ ನೀರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸೂಡ ಗ್ರಾಮದ ಗಾಣದ ಬೆಟ್ಟು ಎಂಬಲ್ಲಿ ನಡೆದಿದೆ.

ಸೂಡ ಗ್ರಾಮದ ಗಾಣದ ಬೆಟ್ಟು ನಿವಾಸಿ ಸುಗುಣ (58) ಮೃತಪಟ್ಟವರು. ಕೃಷಿ ಕೆಲಸ ಮಾಡಿಕೊಂಡಿದ್ದ ಸುಗುಣ ಅವರು ನಿನ್ನೆ ಮನೆಯ ಪಕ್ಕದ ಸುನೀಲ್ ಎಂಬುವವರ ಭತ್ತದ ಗದ್ದೆಯಲ್ಲಿ ಭತ್ತದ ಕಳೆ ತೆಗೆಯುವ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನದ ಊಟಕ್ಕಾಗಿ ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ ಮನೆಯ ಪಕ್ಕದಲ್ಲಿರುವ ನೀರು ತುಂಬಿರುವ ಕೃಷಿ ಹೊಂಡದಲ್ಲಿ ಕೈ-ಕಾಲು ತೊಳೆಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಹೊಂಡದ ನೀರಿಗೆ ಬಿದ್ದಿದ್ದಾರೆ. ಪರಿಣಾಮ ನೀರಿನಲ್ಲಿ ಮುಳುಗಿ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!