ಹೆಬ್ರಿ: ಶಿವಪುರ ನಿವಾಸಿ ಬಾವಿಗೆ ಹಾರಿ ಆತ್ಮಹತ್ಯೆ

ಹೆಬ್ರಿ ಅ.18 (ಉಡುಪಿ ಟೈಮ್ಸ್ ವರದಿ): ತಮಗಿದ್ದ ಅನಾರೋಗ್ಯದಿಂದ ಮಾನಸಿಕವಾಗಿ ನೊಂದು ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಪುರ ಗ್ರಾಮದ ಮುಳ್ಳುಗುಡ್ಡೆ ಕಾಳಾಯಿ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ನಾರಾಯಣ ಶೆಟ್ಟಿಗಾರ್ (73) ಆತ್ಮಹತ್ಯೆ ಮಾಡಿಕೊಂಡವರು. ಇವರು ಸುಮಾರು ವರ್ಷಗಳಿಂದ ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ಹಲವು ಕಡೆಗಳಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು. ಆದರೂ ಅವರ ಕಾಯಿಲೆ ಗುಣಮುಖವಾಗದ ಕಾರಣ ಈ ವಿಚಾರದಲ್ಲಿ ಅವರು ಮಾನಸಿಕವಾಗಿ ನೊಂದು ಕೊಂಡಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅ.17 ರಂದು ಬೆಳಿಗ್ಗೆಯಿಂದ ಸಂಜೆಯ ಅವಧಿಯಲ್ಲಿ ಶಿವಪುರ ಗ್ರಾಮದ ಮುಳ್ಳುಗುಡ್ಡೆ ಕಾಳಾಯಿ ಎಂಬಲ್ಲಿನ ಅವರ ಮನೆಯಿಂದ 300 ಮೀಟರ್ ದೂರದಲ್ಲಿರುವ ಪಿ.ಕೆ ರಾಜನ್ ನಾಯರ್ ಎಂಬವರ ರಬ್ಬರ್ ತೋಟದಲ್ಲಿರುವ ಅವರಣವಿರದ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ತಮ್ಮ ಕೃಷ್ಣ ಶೆಟ್ಟಿಗಾರ ಎಂಬವರು ನೀಡಿದ ಮಾಹಿತಿಯಂತೆ  ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!