ಬೈಂದೂರು: ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಏಣಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬಿಜೆಪಿ ಮುಖಂಡ ಮೃತ್ಯು

ಬೈಂದೂರು ಅ.18 (ಉಡುಪಿ ಟೈಮ್ಸ್ ವರದಿ): ಬೈಂದೂರು ತಾಲೂಕಿನ ಶಿರೂರಿನಲ್ಲಿ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ ಬಿಜೆಪಿ ಮುಖಂಡ ಸತೀಶ ಸುಬ್ರಾಯ ಪ್ರಭು ಅವರು ಮೃತಪಟ್ಟಿದ್ದಾರೆ.

ಸತೀಶ ಸುಬ್ರಾಯ ಪ್ರಭು (52) ಅವರು ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಏಣಿಗೆ ವಿದ್ಯುತ್ ತಂತಿ ಸ್ಪರ್ಶಿಸಿ, ಅವರಿಗೆ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಬೈಂದೂರು ಕ್ರೈಂ ಪಿ.ಎಸ್.ಐ ಮಹೇಶ್ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇವರು ಹಲವಾರು ವರ್ಷಗಳ ಕಾಲ ಭಾರತೀಯ ಜನತಾ ಪಾರ್ಟಿಯಲ್ಲಿ ಸೇವೆ ಸಲ್ಲಿಸಿದ್ದರು. ಇದೀಗ ಇವರು ಸಾವಿನ ಸುದ್ದಿ ಅವರ ಅಪಾರ ಅಭಿಮಾನಿಗಳಿಗೆ ಆಘಾತ ನೀಡಿದೆ. 

Leave a Reply

Your email address will not be published. Required fields are marked *

error: Content is protected !!