ಅ.30 ಉಪ್ಪುಂದದಲ್ಲಿ ವರಲಕ್ಷ್ಮೀ ಬೃಹತ್ ಉದ್ಯೋಗ ಮೇಳ: ಡಾ. ಗೋವಿಂದ ಬಾಬು ಪೂಜಾರಿ

ಉಡುಪಿ: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವತಿಯಿಂದ ಸಮಾಜ ಸೇವಕ ಉದ್ಯಮಿ ಡಾ.ಗೋವಿಂದ ಬಾಬು ಪೂಜಾರಿ ನೇತೃತ್ವದಲ್ಲಿ ಬೈಂದೂರು ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅಕ್ಟೋಬರ್ 30ರಂದು ಉಪ್ಪುಂದ ರಾಷ್ಟ್ರೀಯ ಹೆದ್ದಾರಿ 66 ಬಳಿಯ ನಂದನವನ ಹಾಸ್ಪಿಟಾಲಿಟಿ ಮತ್ತು ಸರ್ವಿಸಸ್ ಹೋಟೆಲ್ ನ ಪ್ರಜ್ಞಾ ಸಾಗರ ಹಾಲ್ ನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಕುರಿತು ಇಂದು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಮಾತನಾಡಿ, ದೇಶದ ಪ್ರತಿಷ್ಠಿತ 30 ಕ್ಕೂ ಅಧಿಕ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ. ಜಿಲ್ಲೆಯ ಪಿಯುಸಿ, ಬಿಕಾಂ, ಬಿಬಿಎಂ, ಬಿಸಿಎ, ಬಿಇ, ಬಿಎಸ್‌ಸಿ, ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ ಈ ಉದ್ಯೋಗ ಮೇಳ ಸುವರ್ಣವಕಾಶವಾಗಲಿದೆ‌ ಎಂದರು. ಸುದ್ದಿಗೋಷ್ಠಿಯಲ್ಲಿ ನಾಗರಾಜ್ ಬೈಂದೂರು,
ಸತ್ಯನಾರಾಯಣ ಗಾಣಿಗ ಇದ್ದರು.

ಡಾ.ಗೋವಿಂದ ಬಾಬು ಪೂಜಾರಿ ಪರಿಚಯ

1977 ರಲ್ಲಿ ಕುಂದಾಪುರದ ಬಿಜೂರಿನ ಕೃಷಿ ಕುಟುಂಬವೊಂದರಲ್ಲಿ ಜನಿಸಿದ ಗೋವಿಂದ ಬಾಬು ಪೂಜಾರಿ ಬಾಲ್ಯದಿಂದಲೇ ಏಳು ಬೀಳುಗಳನ್ನು ಕಂಡವರು. ಕಷ್ಟಗಳ ಅರಿವಿದ್ದ ಇವರು 13ನೇ ವಯಸ್ಸಿನಲ್ಲಿಯೇ ಬದುಕಿನಲ್ಲಿ ಏನಾದರೂ ಸಾಧಿಸುವ ಹೊಂಗನಸಿನೊಂದಿಗೆ ಮುಂಬೈ ಪಟ್ಟಣದಲ್ಲಿ ಕೆಲಸಕ್ಕೆ ಸೇರಿದರು. ಹೋಟೆಲ್ ಒಂದರಲ್ಲಿ ಚಹಾ ಮಾಡುವ ಮೂಲಕ ವೃತ್ತಿ ಬದುಕು ಆರಂಭಿಸಿದ ಗೋವಿಂದ ಅವರು ನಂತರದ ದಿನಗಳಲ್ಲಿ ಬಿಎಸ್‌ಟಿ ಕ್ಯಾಂಟೀನ್‌ನಲ್ಲಿ ಅಡುಗೆ ಸಹಾಯಕನಾಗಿ ಸೇರಿಕೊಂಡರು. ಸನ್ನಿ ಬಾರ್ ನಲ್ಲಿ ಬಾಣಸಿಗನಾಗಿ ಮುಂದೆ ಸ್ವ -ಉದ್ಯೋಗದ ಗುರಿಯೊಂದಿಗೆ ಜನರಲ್ ಸ್ಟೋರ್ ಒಂದನ್ನು ತೆರೆದರು. ಆದರೆ ಇದು ಕೈ ಹಿಡಿಯಲಿಲ್ಲ ಸಾಕಷ್ಟು ನಷ್ಟ ಅನುಭವಿಸಿದರು. ಮತ್ತೆ ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಕ್ಲೀನಿಂಗ್ ವಿಭಾಗದಲ್ಲಿ ಕೆಲಸಕ್ಕೆ ಸೇರಿಕೊಂಡರು. ಅಡುಗೆಯ ವಿಶೇಷ ಆಸಕ್ತಿ ಹೊಂದಿದ್ದ ಗೋವಿಂದ ಅವರು ತನ್ನ ಸ್ವ ಪರಿಶ್ರಮದಿಂದ ಹಂತ ಹಂತವಾಗಿ ಎತ್ತರದ

ಶಿಖರವನ್ನು ತಲುಪಿದ್ದರು, ಶೆಫ್ ಸ್ಥಾನವನ್ನು ಗಳಿಸಿಕೊಂಡರು. ಒಮ್ಮೆ ಸೋಲುಂಡರು ಕೂಡಾ ಇವರ ಸ್ವ ಉದ್ಯಮದ ಕನಸು ಕಮರಲಿಲ್ಲ . 2007 ರಲ್ಲಿ 7 ಮಂದಿ ನೌಕರರೊಂದಿಗೆ ‘ಷೆಫ್ ಟಾಕ್ ಕೇಟರಿಂಗ್ ಸರ್ವಿಸಸ್ ‘ ಸಂಸ್ಥೆಯನ್ನು ಕಟ್ಟಿದರು. ಮುಂದೆ ಇದು ‘ಷೆಫ್ ಟಾಕ್ ಫುಡ್ ಆ್ಯಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ.ಲಿ.’ ಆಗಿ ಬದಲಾಯಿತು.

ಪ್ರಸ್ತುತ ಪೂಜಾರಿ ಅವರು ತಮ್ಮ ಸಂಸ್ಥೆ ಮೂಲಕ 5000 ಜನರಿಗೆ ಉದ್ಯೋಗ ನೀಡಿದ್ದಾರೆ. ಕರ್ನಾಟಕ ಮಹಾರಾಷ್ಟ್ರ, ಆಂಧ್ರಪ್ರದೇಶ, ಜಾರ್ಖಂಡ, ಗುಜರಾತ್‌ ನಲ್ಲಿ ಸಂಸ್ಥೆ, ಅತ್ಯಾಧುನಿಕ ಕಿಚನ್‌ಗಳನ್ನು ಹೊಂದಿದ್ದು, ವಿವಿಧ ಕಾರ್ಪೊರೇಟ್ ಕಂಪನಿಗಳಿಗೆ ಕೇಟರಿಂಗ್ ಸೇವೆ ಒದಗಿಸುತ್ತಿದೆ. ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ 25000 ಚದರ ಅಡಿ ವಿಸ್ತರದಲ್ಲಿ ಇರುವ ಅತ್ಯಾಧುನಿಕ ಕಿಚನ್, ‘ಐಎಸ್‌ಒ’ ಮಾನ್ಯತೆಯನ್ನೂ ಪಡೆದಿದೆ.

ಯಶಸ್ಸಿನ ಬೆನ್ನ ಹತ್ತಿದ ಗೋವಿಂದ ಅವರು ದ್ಘಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮವು ಮತ್ತ್ವಬಂಧನ ಕಂಪನಿಯ ಸಹಯೋಗದಲ್ಲಿ ರಾಣಿ ಮೀನು ಮತ್ತು ಬೂತಾಯಿ ಮೀನುಗಳಿಂದ ಚಿಪ್ಪಳನ್ನು ತಯಾರಿಸುವ ಕಂಪನಿಯನ್ನು ಆರಂಭಿಸಿದರು. ಇದರೊಂದಿಗೆ ಪ್ರಗ್ನಾ ಸಾಗರ್ ಹೋಟೆಲ್ ಮತ್ತು ರೆಸಾರ್ಟ್ಸ್, ಶೆಫ್ ಟಾಕ್ ನ್ಯೂಟ್ರಿಫುಡ್ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ನೂರಾರು ಕೋಟಿ ವಹಿವಾಟು ನಡೆಸುವ ಉದ್ಯಮಿಯಾಗಿ ಬೆಳೆದು ನಿಂತಿದ್ದಾರೆ.

ತಾನೆಷ್ಟೇ ಎತ್ತರಕ್ಕೆ ಬೆಳೆದರೂ ಸಾಮಾಜಿಕ ಕಳಕಳಿಯನ್ನು ಮರೆಯದ ಗೋವಿಂದ ಅವರು ಶ್ರೀವರಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ಮೂಲಕ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ, ಉಪ್ಪುಂದದಲ್ಲಿ ಶ್ರೀ ವರಲಕ್ಷ್ಮೀ ಸೌಹರ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಿ ಅದರ ಅಧ್ಯಕ್ಷರಾಗಿದ್ದಾರೆ. ಇದರೊಂದಿಗೆ ಹತ್ತು ಹಲವಾರು ಸಂಘ ಸಂಸ್ಥೆಗೆ ಸಹಕಾರ ನೀಡುತ್ತಿದ್ದಾರೆ ಹುಟ್ಟೂರಲ್ಲಿ ಶಾಲೆ ಕಟ್ಟಬೇಕು, ಉದ್ದಿಮೆಯನ್ನು ವಿಸ್ತರಿಸಿ ಮತ್ತಷ್ಟು ಜನರಿಗೆ ಉದ್ಯೋಗ ನೀಡಬೇಕು ಎಂದು ತಮ್ಮ ಭವಿಷ್ಯದ ಕನಸುಗಳನ್ನು ಪೂಜಾರಿ ಅವರು ಹಂಚಿಕೊಳ್ಳುತ್ತಾರೆ. ಸ್ವಂತಪರಿಶ್ರಮದಿಂದ ಬದುಕು ಕಟ್ಟಿಕೊಂಡ ಇವರಿಗೆ ಫಾಸ್ಟೆಸ್ಟ್ ಗೋವಿಂಗ್ ಪುಡ್ ದ್ವೀಸ್ ಕಂಪನಿ ಎಐಎಫ್ 2017, ಮೋಸ್ಟ್ ಹೈಜಿನಿಕ್ ಕೆಫೆಟೇರಿಯಾ – ಬಿಎಆರ್‌ಸಿ 2018, ಫಾಸ್ಟೆಸ್ಟ್ ಗೋವಿಂಗ್ ಎಂಟರ್‌ಪ್ರೆಸ್ – ಬಿಸಿಸಿಐ ಆ್ಯಂಡ್‌ ಎಚ್‌ಡಿಎಫ್‌ಸಿ ಬ್ಯಾಂಕ್ 2019 ಮತ್ತು ಆಹಾರೋದ್ಯಮ ಸಾಧನಶ್ರೀ ಸೇರಿದಂತೆ ಹತ್ತು ಹಲವಾರು ಪ್ರಶಸ್ತಿಗಳು ಒಲಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!