ಉಡುಗೊರೆ ನೀಡುವಂತೆ ನಾನು ಯಾರಿಗೂ ಸೂಚನೆ ನೀಡಿಲ್ಲ- ಸಿಎಂ ಬೊಮ್ಮಾಯಿ

ಬೆಂಗಳೂರು: ಪತ್ರಕರ್ತರಿಗೆ ಉಡುಗೊರೆ ನೀಡುವಂತೆ ನಾನು ಯಾರಿಗೂ ಸೂಚನೆ ನೀಡಿಲ್ಲ. ಲೋಕಾಯುಕ್ತ ತನಿಖೆ ಆಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪತ್ರಕರ್ತರಿಗೆ ಉಡುಗೊರೆ ನೀಡಿರುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಭಾನುವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಇದು ಕಾಂಗ್ರೆಸ್ಸಿನ ಟೂಲ್ ಕಿಟ್‌ ಪರಿಣಾಮ. ಸುಳ್ಳನ್ನು ಸೃಷ್ಟಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಪತ್ರಕರ್ತರಿಗೆ ಉಡುಗೊರೆ ನೀಡುವಂತೆ ನಾನು ಯಾರಿಗೂ ಸೂಚನೆ ನೀಡಿಲ್ಲ ಎಂದು ಹೇಳಿದರು.

ಕಾಂಗ್ರೆಸ್‌ನವರು ಹಲವರಿಗೆ ಏನೇನು ಉಡುಗೊರೆಗಳನ್ನು ನೀಡಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಪತ್ರಿಕೆಗಳಲ್ಲಿ ವರದಿಯೂ ಆಗಿದೆ. ಐ ಫೋನ್, ಲ್ಯಾಪ್‌ಟಾಪ್‌, ಬಂಗಾರದ ನಾಣ್ಯಗಳನ್ನೇ ಕೊಟ್ಟಿದ್ದಾರೆ. ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕೂ ಇಲ್ಲ. ಯಾರೋ ಒಬ್ಬರು ಲೋಕಾಯುಕ್ತಕ್ಕೆ ದೂರನ್ನು ನೀಡಿದ್ದು, ತನಿಖೆಯಾಗುತ್ತದೆ. ಇದರ ಅರ್ಥ ಎಲ್ಲ ಪತ್ರಕರ್ತರು ಉಡುಗೊರೆ ಪಡೆದಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ. ಈ ವಿಚಾರದ ಬಗ್ಗೆ ಕಾಂಗ್ರೆಸ್ ವಕ್ತಾರ ಬಹಳ ಕೆಟ್ಟದಾಗಿ ಅದನ್ನು ವ್ಯಾಖ್ಯಾನ ಮಾಡಿದ್ದಾರೆ. ಅದನ್ನು ನಾನು ಖಂಡಿಸುತ್ತೇನೆ‘ ಎಂದರು.

Leave a Reply

Your email address will not be published. Required fields are marked *

error: Content is protected !!