ಮಣಿಪಾಲ: ಹೋಟೆಲ್ ಮ್ಯಾನೆಜ್ ಮೆಂಟ್ ವಿದ್ಯಾರ್ಥಿನಿ ನೇಣಿಗೆ ಶರಣು
ಮಣಿಪಾಲ ನ.3 (ಉಡುಪಿ ಟೈಮ್ಸ್ ವರದಿ): ಹೋಟೆಲ್ ಮ್ಯಾನೆಜ್ ಮೆಂಟ್ ವಿದ್ಯಾರ್ಥಿನಿಯೋರ್ವರು ತಾವು ವಾಸವಿದ್ದ ಫ್ಲಾಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಈಶ್ವರ ನಗರದಲ್ಲಿ ನಡೆದಿದೆ.
ಕೊಲ್ಕತ್ತ ಮೂಲದ ತನುಶ್ರೀ ರೇ(20) ಆತ್ಮಹತ್ಯೆ ಮಾಡಿಕೊಂಡವರು. ಇವರು ಮಣಿಪಾಲದ ವಾಗ್ಶಾ ( WGSHA) ದಲ್ಲಿ ತೃತೀಯ ವರ್ಷದ ಬಿಎಚ್ಎಮ್ (ಬ್ಯಾಚುಲರ್ ಆಫ್ ಹೋಟೆಲ್ ಮ್ಯಾನೆಜ್ ಮೆಂಟ್) ವಿದ್ಯಾಭ್ಯಾಸ ಮಾಡುತ್ತಿದ್ದರು. ಅವರು ಜೀವನದಲ್ಲಿ ಜಿಗುಪ್ಸೆಗೊಂಡು ನ.1 ರ ರಾತ್ರಿಯಿಂದ ನ.2 ರ ಬೆಳಗ್ಗಿನ ಅವಧಿಯಲ್ಲಿ ತಾವು ವಾಸವಿದ್ದ ಫ್ಲಾಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ತಂದೆ ಡಾ.ಚಂದನ್ ರೇ ಅವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.