ಬ್ರಹ್ಮಾವರ: ಡೆತ್ ನೋಟ್ ಬರೆದು ವಿವಾಹಿತೆ ಆತ್ಮಹತ್ಯೆ
ಬ್ರಹ್ಮಾವರ ನ.6(ಉಡುಪಿ ಟೈಮ್ಸ್ ವರದಿ): ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿನ್ಸಿ ಶೈಜು ಥೋಮಸ್ (30) ಆತ್ಮಹತ್ಯೆ ಮಾಡಿಕೊಂಡವರು. ಇವರು ವಿವಾಹಿತರಾಗಿದ್ದು ಇವರ ಗಂಡ ಉದ್ಯೋಗದ ನಿಮಿತ್ತ ದುಬೈಯಲ್ಲಿದ್ದರು, ಇವರು ಮಗಳೊಂದಿಗೆ ಗಂಡನ ಮನೆಯಾದ ಹಂದಾಡಿ ಗ್ರಾಮದ ಬೇಳೂರುಜೆಡ್ಡು ಎಂಬಲ್ಲಿನ ಮನೆಯ 1 ನೇ ಮಹಡಿಯಲ್ಲಿ ಹಾಗೂ ಅವಳ ಅತ್ತೆ, ಮಾವ ಮನೆಯ ಕೆಳ ಅಂತಸ್ತಿನಲ್ಲಿ ವಾಸವಾಗಿದ್ದರು.
ಬಿನ್ಸಿ ಶೈಜು ಥೋಮಸ್ ಅವರು ಅ.26 ರಂದು ರಾತ್ರಿ ಇಲಿಪಾಷಣ ಸೇವಿಸಿ ಡೆತ್ ನೋಟ್ ಬರೆದಿಟ್ಟು ಯಾರಿಗೂ ಹೇಳದೆ ಮನೆಯಲ್ಲಿದ್ದರು. ಅ.31 ರಂದು ಮನೆಯಲ್ಲಿ ತೀವ್ರ ವಾಂತಿ ಭೇದಿಯಿಂದ ಅಸ್ವಸ್ಥಗೊಂಡು ಬಳಲುತ್ತಿದ್ದವರನ್ನು ಚಿಕಿತ್ಸೆಗಾಗಿ ಬ್ರಹ್ಮಾವರದ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬಳಿಕ ವೈದ್ಯರ ಸಲಹೆಯಂತೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿನ್ಸಿ ಶೈಜು ಥೋಮಸ್ ಅವರು ಚಿಕಿತ್ಸೆ ಫಲಕಾರಿಯಾಗದೇ ನ.5 ರಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅದರಂತೆ ಇವರು ಒಬ್ಬರೇ ಮಗುವಿನೊಂದಿಗೆ ಒಂಟಿಯಾಗಿ ವಾಸವಾಗಿರುವ ಕೊರಗಿನಲ್ಲಿ ಇಲಿ ಪಾಷಣ ಸೇವಿಸಿ ಆರೋಗ್ಯ ತೀರಾ ಹದಗೆಟ್ಟು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಮೃತರ ತಾಯಿ ಲಾಲಿ ವೆಲ್ಸಿತಾ ಅವರು ನೀಡಿದ ಮಾಹಿತಿಯಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.