ಮಲ್ಪೆ: ತೆಂಕನಿಡಿಯೂರಿನ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಮಲ್ಪೆ ನ.7 (ಉಡುಪಿ ಟೈಮ್ಸ್ ವರದಿ): ಮನೆ ಮಾರಾಟ ಮಾಡುವ ವಿಚಾರದಲ್ಲಿ ಪೋಷಕರೊಂದಿಗೆ ಗಲಾಟೆ ಮಾಡಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕನಿಡಿಯೂರಿನ ಈಶ್ವರ ನಗರದಲ್ಲಿ ನಡೆದಿದೆ.

ಅಂಬಲಪಾಡಿಯಲ್ಲಿ ಎನಿಮೇಷನ್ ಕೆಲಸ ಮಾಡಿಕೊಂಡಿದ್ದ ಸಾಗರ್ (20) ಆತ್ಮಹತ್ಯೆ ಮಾಡಿಕೊಂಡವರು. ಇವರು ಅಂಬಲಪಾಡಿಯಲ್ಲಿ ಎನಿಮೇಷನ್ ಕೆಲಸ ಮಾಡಿಕೊಂಡಿದ್ದು, ಮದ್ಯಪಾನ  ಸೇವನೆ ಮಾಡುವ ಅಭ್ಯಾಸ ಹೊಂದಿದ್ದರು. ನ.6 ರಂದು ರಜೆ ಇದ್ದುದರಿಂದ ಮನೆಯಲ್ಲಿಯೇ ಇದ್ದು ಬಳಿಕ ತಡರಾತ್ರಿ ಮಧ್ಯಪಾನ ಸೇವಿಸಿ ಮನೆಗೆ ಬಂದಿದ್ದರು. ಈ ವೇಳೆ ಮನೆ ಮಾರಾಟ ಮಾಡುವ ವಿಷಯದಲ್ಲಿ ತಂದೆಯೊಂದಿಗೆ ಜಗಳ ಮಾಡಿ ಸಂಬಂಧಿ ಮನೆಗೆ ಹೋಗಿದ್ದರು. ಆದರೆ ಅಲ್ಲಿಯೂ ಸಾಗರ್ ಅವರು ಗಲಾಟೆ ಮಾಡಿ ವಾಪಸ್ಸು ಮನೆಗೆ ಬರುತ್ತಿರುವುದಾಗಿ ಸಾಗರ್ ಅವರ ಮಾವ ತಾಯಿಗೆ ಕರೆ ಮಾಡಿ ತಿಳಿಸಿದ್ದರು. ಆದರೆ ಇಂದು ಬೆಳಿಗ್ಗೆ 4 ಗಂಟೆಗೆ ಸುಮಾರಿಗೆ ಸಾಗರ್ ಅವರು ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.  

ಸಾಗರ ಅವರು ಮನೆ ಮಾರಾಟದ ವಿಚಾರದಲ್ಲಿ ಪದೇ ಪದೇ ಗಲಾಟೆ ಮಾಡುತ್ತಿದ್ದು ಅದೇ ವಿಚಾರದಲ್ಲಿ  ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ತಂದೆ ರವಿ ಎಂ.ಎಸ್ ಅವರು ನೀಡಿದ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!