ಯುವಕನ ಹತ್ಯೆಗೈದು ಪೆಟ್ರೋಲ್ ಸುರಿದು ಸುಟ್ಟ ಆರೋಪಿ ಆಟೋ ಚಾಲಕನ ಬಂಧನ

ಬಂಟ್ವಾಳ, ನ.8: ಇರಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಯುವಕನೋರ್ವನನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಆಟೋ ಚಾಲಕನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬೊಳಂತರೂ ನಿವಾಸಿ, ಆಟೋ ರಿಕ್ಷಾ ಚಾಲಕ ಅದ್ದು ಯಾನೆ ಅದ್ರಾಮ ಬಂಧಿತ ಆರೋಪಿ. ಸುರಿಬೈಲ್ ನಿವಾಸಿ  ಸಮದ್ ಯಾನೆ ಚಪ್ಪಿ(19) ಮೃತ ಯುವಕ.

ಸಮದ್ ಎರಡು ದಿನಗಳಿಂದ ನಾಪತ್ತೆಯಾಗಿದ್ದು, ಈತ ಆರೋಪಿಯ ಜೊತೆಯಲ್ಲೇ ಇರುತ್ತಿದ್ದ ಎಂದು ಹೇಳಲಾಗಿದೆ. ಘಟನೆ ರವಿವಾರ ನಡೆದಿದ್ದು, ಇಂದು ಬೆಳಗ್ಗೆ ಆರೋಪಿಯನ್ನು ಬಂಧಿಸಿದ್ದಾರೆ. ಹಾಗೂ ಪೊಲೀಸರು ಆತನನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಬಂದು ಪರಿಶೀಲನೆ ನಡೆಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಆರೋಪಿ ಯುವಕನನ್ನು ಇರಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಮೃತದೇಹವನ್ನು ಸುಟ್ಟು ಹಾಕಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!