ರಿವಾಲ್ವಾರ್ ಸ್ವಚ್ಛಗೊಳಿಸುವಾಗ ಗುಂಡು ತಗುಲಿ ಐಪಿಎಸ್ ಅಧಿಕಾರಿ ಗಂಭೀರ

ಬೆಂಗಳೂರು: ಹಿರಿಯ ಐಪಿಎಸ್​ ಅಧಿಕಾರಿ ಆರ್​​​.ಪಿ ಶರ್ಮಾ ಸರ್ವಿಸ್ ರಿವಾಲ್ವಾರ್ ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ ಅವರ ಕುತ್ತಿಗೆಗೆ ಗುಂಡು ತಗುಲಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಗೃಹ ಮಂಡಳಿಯ ಪೊಲೀಸ್ ಮಹಾನಿರ್ದೇಶಕರಾಗಿರುವ ಆರ್ ಪಿ ಶರ್ಮಾ ಅವರು ಇಂದು ಸಂಜೆ ತಮ್ಮ ಕೊತ್ತನೂರು ನಿವಾಸದಲ್ಲಿದ್ದ ವೇಳೆ ಮಿಸ್ ಫೈರ್ ಆಗಿದ್ದು, ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ತಿಳಿಸಿದ್ದಾರೆ.

ವೈದ್ಯರ ತಂಡ ಆರ್​​.ಪಿ ಶರ್ಮಾ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದೆ.

ಈ ಮಧ್ಯೆಯೇ ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಅವರು, ಆರ್​​​.ಪಿ ಶರ್ಮಾ ಆಕಸ್ಮಿಕವಾಗಿ ಫೈರ್​​ ಮಾಡಿಕೊಂಡಿದ್ಧಾರೆ ಎಂದು ಮಾಹಿತಿ ನೀಡಿದ್ಧಾರೆ

Leave a Reply

Your email address will not be published. Required fields are marked *

error: Content is protected !!