ಆಭರಣದಂಗಡಿಯಲ್ಲಿ ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಕಳವು
ಉಡುಪಿ ನ.30 (ಉಡುಪಿ ಟೈಮ್ಸ್ ವರದಿ): ನಗರದ ಕನಕದಾಸ ರಸ್ತೆಯಲ್ಲಿರುವ ಜುವೆಲ್ಲರ್ಸ್ ಅಂಗಡಿಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಹಾಗೂ ಓರ್ವ ವ್ಯಕ್ತಿ 22 ಸಾವಿರ ರೂ. ಮೌಲ್ಯದ ಚಿನ್ನದ ಸರವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.
ನ.27 ರಂದು ಸಂಜೆ ವೇಳೆ ಉಡುಪಿ ಕನಕದಾಸ ರಸ್ತೆಯಲ್ಲಿರುವ ಪಾಂಡುರಂಗ ಜುವೆಲ್ಲರ್ಸ್ ಅಂಗಡಿಗೆ ಗ್ರಾಹಕರಂತೆ ಇಬ್ಬರು ಅಪರಿಚಿತ ಮಹಿಳೆಯರು ಮತ್ತು ಓರ್ವ ಗಂಡಸು ಅಂಗಡಿಯ ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದು 4 ಗ್ರಾಂ ತೂಕದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಹಾಗೂ ಕಳವಾದ ಚಿನ್ನದ ಸರದ ಮೌಲ್ಯ 22,000 ರೂ. ಆಗಿದೆ ಎಂಬುದಾಗಿ ಅಂಗಡಿಯ ಮಾಲೀಕರಾದ ಬಿ. ಸತ್ಯನಾರಾಯಣ ಶೇಟ್ ಎಂಬವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.