ಮಾದಕ ವಸ್ತು ಸೇವನೆ- ಉದ್ಯಾವರದ ಯುವಕ ಪೊಲೀಸ್ ವಶಕ್ಕೆ
ಕಾಪು ಡಿ.4(ಉಡುಪಿ ಟೈಮ್ಸ್ ವರದಿ): ಉದ್ಯಾವರ ಗ್ರಾಮದ ಗ್ರಾಮ ಪಂಚಾಯತ್ ಕಛೇರಿಯ ಬಳಿ ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೂರ್ಣೇಶ್ ಪೊಲೀಸ್ ವಶಕ್ಕೆ ಪಡೆದ ವ್ಯಕ್ತಿ.
ನ.30 ರಂದು ಕಾಪು ಠಾಣಾ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಉಡುಪಿ ತಾಲೂಕಿನ ಉದ್ಯಾವರ ಗ್ರಾಮದ ಗ್ರಾಮ ಪಂಚಾಯತ್ ಕಛೇರಿಯ ಬಳಿ ಅನುಮಾನಾಸ್ಪದವಾಗಿ ಕಂಡ ಪೂರ್ಣೇಶ್ ನನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಡಿ.3 ರಂದು ಲಭ್ಯವಾದ ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದು, ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.