ಕನ್ನಡದ ಹಿರಿಯ ಹಾಸ್ಯ ನಟ ಮಂದೀಪ್ ರಾಯ್ ಹೃದಯಾಘಾತದದಿಂದ ನಿಧನ
ಬೆಂಗಳೂರು: ಕನ್ನಡ ಚಲನ ಚಿತ್ರದ ಹಿರಿಯ ಹಾಸ್ಯ ನಟ ಮಂದೀಪ್ ರಾಯ್ (73) ಅವರು ಹೃದಯಾಘಾತದದಿಂದ ನಿಧನ ಹೊಂದಿದ್ದಾರೆ.
ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿಯ ವೇಳೆ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇದು ಮೊದಲನೇ ಬಾರಿಯ ಹೃದಯಾಘಾತವಲ್ಲ ಕಳೆದ ವರ್ಷದ ಡಿಸೆಂಬರ್ ನಲ್ಲಿ ಮಂದೀಪ್ ರಾಯ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.