ಉಡುಪಿ ಮಾದಕ ವಸ್ತು ಸೇವನೆ ಪ್ರಕರಣ: ಮೂವರು ವಿದ್ಯಾರ್ಥಿಗಳು ವಶಕ್ಕೆ
ಉಡುಪಿ ಫೆ.2(ಉಡುಪಿ ಟೈಮ್ಸ್ ವರದಿ): ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಉಡುಪಿ ಸೆನ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಜ.30 ರಂದು ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಸರ್ಕಲ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಜ್ಞಾನೇಶ್ವರ(28)ನನ್ನು, ಶಿವಳ್ಳಿ ಗ್ರಾಮದ ಅಪಾರ್ಟ್ಮೆಂಟ್ ವೊಂದರ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಹರ್ಷವರ್ಧನ್ ಮಿಶ್ರಾ (22) ಮತ್ತು ಹೇಮನ್ಯ ದೇವ್ ಸಿಂಗ್ ರಾಣಾವತ್(20) ಎಂಬ ಮೂವರನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಇಂದು ಲಭ್ಯವಾದ ಈ ಮೂವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣ ದಾಖಲಾಗಿದೆ.