ಉಡುಪಿಯ ಶ್ರಾವಣಿ ಭಟ್’ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ

ಉಡುಪಿ ಫೆ.2 (ಉಡುಪಿ ಟೈಮ್ಸ್ ವರದಿ): ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಡಮಾಡುವ ಈ ಭಾರಿಯ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಉಡುಪಿಯ ಶ್ರಾವಣಿ ಭಟ್ ಭಾಜನರಾಗಿದ್ದಾರೆ.

ಬೈಲೂರಿನ ಸ್ಮಿತಾ ಮತ್ತು ಕೃಷ್ಣರಾಜ ಭಟ್ ದಂಪತಿಗಳ ಪುತ್ರಿಯಾದ ಶ್ರಾವಣಿ ಭಟ್ ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 9 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ. ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದ್ದು, ಇದು ಹತ್ತು ಸಾವಿರ ರೂ. ನಗದು ಒಳಗೊಂಡಿರುತ್ತದೆ. 

Leave a Reply

Your email address will not be published. Required fields are marked *

error: Content is protected !!