ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿದ ಆಂಬುಲೆನ್ಸ್-ಒಂದೂವರೆ ವರ್ಷದ ಮಗು ಮೃತ್ಯು

ಬೆಂಗಳೂರು: ಹಾಸನದಿಂದ ಚಿಕಿತ್ಸೆಗೆಂದು ಕರೆತರುತ್ತಿದ್ದ ಒಂದೂವರೆ ವರ್ಷದ ಮಗು ಮಾರ್ಗಮಧ್ಯೆಯೇ ಮೃತಪಟ್ಟಿದೆ. ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದಿಂದ ಗೊರಗುಂಟೆಪಾಳ್ಯದವರೆಗಿನ ಮುಖ್ಯರಸ್ತೆಯಲ್ಲಿ ಗುರುವಾರ ಉಂಟಾಗಿದ್ದ ವಿಪರೀತ‌ ದಟ್ಟಣೆಯಲ್ಲಿ ಆಂಬುಲೆನ್ಸ್ ಸಿಲುಕಿತ್ತು.

ಸೂಕ್ತ ಸಮಯದಲ್ಲಿ‌ ಮಗುವನ್ನು ಆಸ್ಪತ್ರೆಗೆ ದಾಖಲಿಸದಿದ್ದರಿಂದ ಮೃತಪಟ್ಟಿರುವುದಾಗಿ ಸಂಬಂಧಿಕರು ಆರೋಪಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು ಹುದಾ ಕೌಸರ್​​ ನೆಲಮಂಗಲ ಬಳಿ ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ಪಡೆಯಲಾಗದೆ ಮೃತಪಟ್ಟಿದೆ. ಹಾಸನದಲ್ಲಿ‌ ಗುರುವಾರ ಅಪಘಾತ ಸಂಭವಿಸಿತ್ತು. ಗಾಯಗೊಂಡಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆತರಲಾಗುತ್ತಿತ್ತು.

Leave a Reply

Your email address will not be published. Required fields are marked *

error: Content is protected !!