ಕಾಪು: ವ್ಯಕ್ತಿಯ ಇರಿದು ಬರ್ಬರ ಹತ್ಯೆ
ಕಾಪು: ಭೂವ್ಯವಹಾರಕ್ಕೆ ಸಂಬಂಧಿಸಿ ಪಾಂಗಾಳದಲ್ಲಿ ವ್ಯಕ್ತಿಯೋರ್ವನನ್ನು ಚೂರಿಯಿಂದ ಇರಿದು ಬರ್ಬರವಾಗಿ ಇರಿದು ಕೊಲೆಗೈದ ಘಟನೆ ರವಿವಾರ ಸಂಜೆ ನಡೆದಿದೆ.
ಕೊಲೆಯಾದ ಯುವಕನನ್ನು ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (36) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದಾಗಲೇ ಶರತ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕಾಪು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ