ದುಬೈಗೆ ಅಕ್ರಮವಾಗಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರ ಬಂಧನ
ಮಂಗಳೂರು ಫೆ.13 : ವಿಮಾನದಲ್ಲಿ ಭಾರತದಿಂದ ದುಬೈಗೆ ಅಕ್ರಮವಾಗಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಭಟ್ಕಳದ ಅನಾಸ್ ಮತ್ತು ಅಮ್ಮರ್ ಬಂಧಿತ ಆರೋಪಿಗಳು. ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದಲ್ಲಿ ತಪಾಸಣೆ ವೇಳೆ ವಜ್ರ ಪತ್ತೆಯಾಗಿದ್ದು, ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.
ಇವರಿಬ್ಬರು ತಮ್ಮ ಶೂ ಮತ್ತು ಬ್ಯಾಗ್ ಅಡಿಯಲ್ಲಿ ಅನುಮಾನ ಬಾರದಂತೆ ವಜ್ರವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.