ಉಡುಪಿ: ಹರಿಣಾಕ್ಷಿ ಎಂ.ಡಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ
ಉಡುಪಿ ಫೆ.13(ಉಡುಪಿ ಟೈಮ್ಸ್ ವರದಿ): ಉಡುಪಿಯ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥೆಯಾಗಿರುವ ಹರಿಣಾಕ್ಷಿ ಎಂ.ಡಿ. ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಹರಿಣಾಕ್ಷಿ ಎಂ.ಡಿ. ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮೈಸೂರು ಇಲ್ಲಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಕವಿತಾ ರೈ ಅವರ ಮಾರ್ಗದರ್ಶನದಲ್ಲಿ ವಿಶ್ವವಿದ್ಯಾನಿಲಯಕ್ಕೆ ಮಂಡಿಸಿದ “ದಕ್ಷಿಣ ಕನ್ನಡ ಜಿಲ್ಲೆಯ ಜನಪದ ಕಥೆಗಳಲ್ಲಿ ಮಹಿಳೆ” ಎಂಬ ವಿಷಯದ ಕುರಿತ ಸಂಶೋಧನ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ.
ಹರಿಣಾಕ್ಷಿ ಎಂ.ಡಿ. ಅವರ ಪತಿ ಸೀತಾರಾಮ ಕೇವಳ ಅವರು ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿದ್ದಾರೆ.ಹಿರಿಯ ಮಗ ಇಂಜಿನಿಯರ್ ಸುಜನ್ ಕೇವಳ ಉದ್ಯಮಿಯಾಗಿದ್ದು, ಕಿರಿಯ ಮಗ ಸುತನ್ ಕೇವಳ ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದಾರೆ.