ಪಕ್ಷ ಅಪೇಕ್ಷೆ ಪಟ್ಟರೆ ನಾನು ಉಡುಪಿ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧೆ – ವಿಜಯ್ ಕೊಡವೂರು

ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಉತ್ಸಾಕನಾಗಿದ್ದು, ಪಕ್ಷ ಹಾಗೂ ಪಕ್ಷದ ಹಿರಿಯರು ಅವಕಾಶ ಕೊಟ್ಟರೆ ನೂರಕ್ಕೆ ನೂರು ಸ್ಪರ್ಧಿಸುತ್ತೇನೆ ಎಂದು ನಗರಸಭಾ ಸದಸ್ಯ ಕೆ. ವಿಜಯ್ ಕೊಡವೂರು ಹೇಳಿದ್ದಾರೆ.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ತಮ್ಮ ವಾರ್ಡಿನ 2.5 ವರ್ಷದ ಅಭಿವೃದ್ಧಿ ಕಾರ್ಯಗಳ ಪುಸ್ತಕ ಬಿಡುಗಡೆ ಗೊಳಿಸಿ ಮಾತನಾಡಿದ ಅವರು, ಅವಕಾಶ ಸಿಕ್ಕರೆ ಜನ ಸೇವೆಗೆ ಸದಾ ಸಿದ್ದ. ಪಕ್ಷದ ಹಿರಿಯರು, ಕಾರ್ಯಕರ್ತರು ಅಪೇಕ್ಷೆಯಂತೆ ಮುಂದಿನ ಚುನಾವಣೆಗೆ ನಿಲ್ಲಲು ಸೂಚಿಸಿದರೆ ನನ್ನ ವಾರ್ಡಿನಲ್ಲಿ ನಡೆದಂತ ಅಭಿವೃದ್ಧಿ ಕಾರ್ಯಗಳಂತೆ ಪ್ರತಿಯೊಬ್ಬರ ಹಿತ ಕಾಪಾಡಿಕೊಂಡು ಜನಸೇವೆಗೆ ಮುನ್ನುಗುವುದಾಗಿ ತಿಳಿಸಿದ್ದಾರೆ.

ಒಂದು ವೇಳೆ ಅವಕಾಶ ಸಿಗದಿದ್ದರೆ ಬೇಸರ ಮಾಡುವುದಿಲ್ಲ. ಪಕ್ಷ ಸೂಚಿಸಿದ ಅಭ್ಯರ್ಥಿ ಜೊತೆ ಸೇರಿ ಕೆಲಸ ಮಾಡುತ್ತೇವೆ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಚುನಾವಣೆಗೆ ಸ್ಪರ್ಧಿಸುವ ಆಸೆ ಇದೆ. ಕಾರ್ಯಕರ್ತರು, ಅಭಿಮಾನಿಗಳು ನನಗೆ ಒತ್ತಡ ಹಾಕುತ್ತಿದ್ದಾರೆ. ಆದರೆ ಬಂಡಾಯ ಏಳುವ ಮನೋಭಾವ ನಮ್ಮದ್ದಲ್ಲ‌ ಎಂದು‌ ಹೇಳಿದರು.

ಉಡುಪಿ ಕ್ಷೇತ್ರದಲ್ಲಿ ಅಭ್ಯರ್ಥಿಯ ಬದಲಾವಣೆ ಸಹಿತ ಬೇರೆ ಯಾವ ಮಾಹಿತಿಯೂ ನನಗಿಲ್ಲ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!