ಮಣಿಪಾಲ: ಪ್ರೆಸ್ ಉದ್ಯೋಗಿ ನೇಣಿಗೆ ಶರಣು
ಉಡುಪಿ ಫೆ.13(ಉಡುಪಿ ಟೈಮ್ಸ್ ವರದಿ): ಕೆಲಸವಿಲ್ಲದೆ ಆರ್ಥಿಕ ಸಮಸ್ಯೆಯಿಂದಾಗಿ ಮನನೊಂದು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಸಂಕೇತ್ (23) ಮೃತಪಟ್ಟವರು. ಬಾಂಬೆಯಲ್ಲಿ ಹೋಟೇಲ್ ಕೆಲಸದಲ್ಲಿದ್ದವರು 2 ವಾರಗಳ ಹಿಂದೆ ಊರಿಗೆ ಬಂದು ಮಣಿಪಾಲ ಪ್ರೆಸ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಆದರೆ ಸರಿಯಾದ ಕೆಲಸ ಇಲ್ಲದೆ ಹಣಕಾಸಿನ ಸಮಸ್ಯೆಯಿಂದ ಅಥವಾ ಇನ್ನಾವುದೋ ಕಾರಣದಿಂದ ನಿನ್ನೆ ರಾತ್ರಿ ವೇಳೆ ಉಡುಪಿ ಬನ್ನಂಜೆಯಲ್ಲಿರುವ ತಮ್ಮ ಮನೆಯಲ್ಲಿನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್: 0802572 2573 ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.