ಸುಣ್ಣವೆಂದು ವಿಳ್ಯದೆಲೆಗೆ ಇಲಿ ಪಾಷಣ ಹಚ್ಚಿ ತಿಂದ ಮಹಿಳೆ ಮೃತ್ಯು
ಗಂಗೊಳ್ಳಿ ಫೆ.13(ಉಡುಪಿ ಟೈಮ್ಸ್ ವರದಿ): ವಿಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣ ಸೇರಿಸಿ ತಿಂದು ಅಸ್ವಸ್ಥಗೊಂಡ ವಯೋವೃದ್ಧರೊಬ್ಬರು ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಧು ಪೂಜಾರ್ತಿ(71) ಮೃತಪಟ್ಟವರು
ಇವರಿಗೆ ವಿಳ್ಯದೆಲೆ ಸೇವಿಸುವ ಅಭ್ಯಾಸವಿದ್ದು ಎಂದಿನಂತೆ ಫೆ.6 ರಂದು ಬೆಳಗ್ಗೆ 6 ಗಂಟೆಗೆ ಎದ್ದು ವಿಳ್ಯದೆಲೆ ಸೇವಿಸುತ್ತಿರುವಾಗ ವಿಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣವನ್ನು ಸೇರಿಸಿ ತಿಂದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಸಂಜೆ ವೇಳೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಈ ಮೃತರ ಮಗಳು ದೇವಿ ಎಂಬವರು ನೀಡಿದ ಮಾಹಿತಿಯಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.