ಉರಿಗೌಡ ಟಿಪ್ಪುವನ್ನು ಹೊಡೆದಂತೆ ಸಿದ್ದರಾಮಯ್ಯರನ್ನು ಮಾಡಬೇಕು- ಡಾ. ಅಶ್ವಥ್ ನಾರಾಯಣ

ಮಂಡ್ಯ: ‘ಟಿಪ್ಪು ಎಂದೊಡನೆ ಸಿದ್ದರಾಮಯ್ಯ ಅವರು ಬಂದುಬಿಡುತ್ತಾರೆ. ಉರಿಗೌಡ, ನಂಜೇಗೌಡ ಟಿಪ್ಪುವನ್ನು ಮೇಲಕ್ಕೆ ಕಳುಹಿಸಿದಂತೆ ಇವರನ್ನೂ ಕಳುಹಿಸಬೇಕು, ಹೊಡೆದುಹಾಕಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿರುವ ವಿಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸಾತನೂರು ಗ್ರಾಮದ ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಮಂಗಳವಾರ ನಡೆದ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ಸಿದ್ದರಾಮಯ್ಯ ಅವರನ್ನು ಟಿಪ್ಪುವಿಗೆ ಹೋಲಿಸಿದ ಸಚಿವರು ‘ಉರಿಗೌಡ ನಂಜೇಗೌಡ ಏನು ಮಾಡಿದರು’ ಎಂದು ಪ್ರಶ್ನಿಸುತ್ತಾರೆ. ಕಾರ್ಯಕರ್ತರು ಇದಕ್ಕೆ ‘ಮೇಲಕ್ಕೆ ಕಳುಹಿಸಿದರು, ಹೊಡೆದು ಹಾಕಿದರು’ ಎಂದು ಉತ್ತರಿಸುತ್ತಾರೆ. ‘ಅದೇ ರೀತಿ ಇವರನ್ನೂ ಹೊಡೆದು ಹಾಕಬೇಕು, ಮೇಲಕ್ಕೆ ಕಳುಹಿಸಬೇಕು’ ಎಂದು ಸಚಿವರು ಉತ್ತರಿಸುತ್ತಾರೆ.

Leave a Reply

Your email address will not be published. Required fields are marked *

error: Content is protected !!