ಬಂಟ್ವಾಳ: ಸ್ನೇಹಿತನಿಂದಲೇ ಚೂರಿ ಇರಿತ
ಬಂಟ್ವಾಳ: ಗಾಂಜಾ ನಶೆಯಲ್ಲಿ ಸ್ನೇಹಿತನಿಗೆ ಚೂರಿಯಲ್ಲಿ ಇರಿದ ಘಟನೆ ಇಂದು ಮಧ್ಯಾಹ್ನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಪಾಣೆಮಂಗಳೂರು ನೆಹರು ನಗರ ನಿವಾಸಿ ಸುಲೈಮಾನ್ ಎಂಬಾತನಿಗೆ ಆತನ ಸ್ನೇಹಿತ ನಿಸಾರ್ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಇಬ್ಬರೂ ನೆರೆಕೆರೆಯ ನಿವಾಸಿಗಳಾಗಿದ್ದು ಗಾಂಜಾ ವ್ಯಸನಿಗಳಾಗಿದ್ದರು ಎನ್ನಲಾಗಿದೆ.
ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆ ಇವರಿಬ್ಬರು ನೆಹರು ನಗರದ ಬಳಿ ಬಂದಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ನಿಶಾರ್ ಸುಲೈಮಾನ್ ಗೆ ಚೂರಿಯಿಂದ ಹೊಟ್ಟೆಯ ಭಾಗಕ್ಕೆ ತಿವಿದಿದ್ದಾನೆ ಎನ್ನಲಾಗಿದೆ.