ಅಧಿಕಾರಿಗಳ ಜಟಾಪಟಿ : ರೋಹಿಣಿ ಸಿಂಧೂರಿ, ಡಿ.ರೂಪಾ ಸಹಿತ ಮೂವರ ವರ್ಗಾವಣೆ
ಬೆಂಗಳೂರು; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಜಟಾಪಟಿ ಇದೀಗ ಬೀದಿಗೆ ಬಂದಿದ್ದು, ಈ ಸಂಬಂಧ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಅವರನ್ನ ಸ್ಥಳ ನಿಯೋಜಿಸದೇ ವರ್ಗಾವಣೆ ಮಾಡಲಾಗಿದೆ.
ರೂಪಾ ಅವರ ಪತಿ ಮುನೀಶ್ ಮೌದ್ಗೀಲ್ ಅವರನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿ ಆಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.