ಸರ್ಕಾರಿ ನೌಕರರ ಪ್ರತಿಭಟನೆಗೆ ಯಡಿಯೂರಪ್ಪ ಕುತಂತ್ರ ಕಾರಣ-ಕಾಂಗ್ರೆಸ್ ಟ್ವೀಟ್ ಗೆ ಈಶ್ವರಪ್ಪ ತಿರುಗೇಟು

ಮೈಸೂರು: ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಕೆಂಡಕಾರಿದ್ದಾರೆ. ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಅನ್ನೋದು ಕುತಂತ್ರ ಎಂಬ ಕಾಂಗ್ರೆಸ್ ಟ್ವೀಟ್‌ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಕಿತ್ತಾಟ ಇದೆ. ಅದೇ ರೀತಿ ಬಿಜೆಪಿಯವರೂ ಕಿತ್ತಾಡಲಿ ಎಂದು ಬಯಸುತ್ತಿದ್ದಾರೆ.

ಇನ್ನು ಯಡಿಯೂರಪ್ಪ ಅವರ ರಾಜೀನಾಮೆ ಕುರಿತು ‘ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಇವರೆಲ್ಲರನ್ನ ಅನಾರೋಗ್ಯ ಕಾರಣದಿಂದ ಕೆಳಗಿಳಿಸಲಿಲ್ಲ. ನಿಜಲಿಂಗಪ್ಪ ಮತ್ತು ವೀರೇಂದ್ರ ಪಾಟೀಲ್ ಅವರಂತಹ ನಾಯಕರನ್ನು ಕಾಂಗ್ರೆಸ್ ಅವಮಾನಿಸಿದೆ, ರಾಜೀವ್ ಗಾಂಧಿ ನೇರವಾಗಿ ಏರ್ ಪೋರ್ಟ್​ನಿಂದ ಅಪಮಾನ ಮಾಡಿ ಇಳಿಸಿದ್ರು. ಯಡಿಯೂರಪ್ಪನವರು ಅವರೇ ರಾಜೀನಾಮೆ ಕೊಟ್ಟಿದ್ದಾರೆ.

ಇವೆರೆಡಕ್ಕೂ ಬಹಳ ವ್ಯತ್ಯಾಸ ಇದೆ. ರಾಜಕೀಯ ಕುತಂತ್ರದಿಂದ ಈ ರೀತಿ ಹೇಳಿಕೆಗಳನ್ನ ಕಾಂಗ್ರೆಸ್​ ನವರು ಹೇಳುತ್ತಿದ್ದಾರೆ. ವೀರೇಂದ್ರ ಪಾಟೀಲ್ ಅವರು ಎಂತಹ ಆಡಳಿತಗಾರರು ಎಂದು ಎಲ್ಲರಿಗೂ ಗೊತ್ತು. ಶಿವಮೊಗ್ಗ ಜನರು ಅವರ ಹೆಸರಿನಲ್ಲಿಯೇ ನೀರು ಕುಡಿತಾ ಇದ್ದಾರೆ. ರಾಜ್ಯದ ಜನ ಎಲ್ಲವನ್ನು ನೋಡಿದ್ದಾರೆ ಎಂದು ಕಾಂಗ್ರೆಸ್ ಅವರ ಹೇಳಿಕೆಗಳಿಗೆ ಪ್ರತ್ಯುತ್ತರ ನೀಡಿದರು.

Leave a Reply

Your email address will not be published. Required fields are marked *

error: Content is protected !!