ಕಾರ್ಕಳ: ವಿಷ ಸೇವಿಸಿ 18 ವರ್ಷದ ಯುವಕ ಆತ್ಮಹತ್ಯೆ

ಕಾರ್ಕಳ ಮಾ14 (ಉಡುಪಿ ಟೈಮ್ಸ್ ವರದಿ): ತಾಲೂಕಿನ ಕಸಬಾ ಗ್ರಾಮದ ಕೃಷ್ಣಗಿರಿ ಹಿರಿಯಂಗಡಿ ಎಂಬಲ್ಲಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪ್ರಜ್ವಲ್‌ ದೇವಾಡಿಗ(18)ಆತ್ಮಹತ್ಯೆ ಮಾಡಿಕೊಂಡವರು. ಮಾ.12 ರಂದು ರಾತ್ರಿ ವೇಳೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಈ  ಬಗ್ಗೆ ಮೃತರ ಅಣ್ಣ ನೀಡಿದ ಮಾಹಿತಿಯಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್: 08025722573, ಸಮರ್ಥನಂ ಆವರಣ, 15ನೇ ಕ್ರಾಸ್,ಹೆಚ್‍ಎಸ್‍ಆರ್ ಸೆಕ್ಟರ್-4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!