ಬ್ರಹ್ಮಾವರ: ಅಸ್ವಸ್ಥಗೊಂಡ ಎರಡು ವರ್ಷದ ಮಗು ಮೃತ್ಯು

ಬ್ರಹ್ಮಾವರ ಮಾ.16(ಉಡುಪಿ ಟೈಮ್ಸ್ ವರದಿ): ಅನಾರೋಗ್ಯದಿಂದ ಅಸ್ವಸ್ಥಗೊಂಡು 2 ವರ್ಷದ ಮಗುವೊಂದು ಮೃತಪಟ್ಟ ಘಟನೆ ಆರೂರು ಗ್ರಾಮದಲ್ಲಿ ನಡೆದಿದೆ.

ಬಿಹಾರ ಮೂಲದವರಾದ ರಾಜ್‌ ಕುಮಾರ್‌ ಅವರ ಮಗಳಾದ ಖುಷಿ(2) ಮೃತಪಟ್ಟವರು.

ರಾಜ್ ಕುಮಾರ್ ಅವರು ಆರೂರು ಗ್ರಾಮದ ಹೆಬ್ಬಾರು ಬೆಟ್ಟು ಎಂಬಲ್ಲಿ ಸಕಲೇಶಪುರದ ಎನ್‌.ಆರ್‌ ವಿವೇಕ್‌ ಎಂಬವರಿಗೆ ಸಂಬಂಧಿಸಿದ ಕೃಷಿ ಫಾರ್ಮ್‌ ನ ಬಿಡಾರದಲ್ಲಿ ವಾಸಮಾಡಿಕೊಂಡಿದ್ದು, ಫಾರ್ಮ್‌ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಅವರ ಎರಡು ವರ್ಷದ ಮಗಳಾದ ಖುಷಿಗೆ ಮಾ.15 ರಂದು ಜ್ವರ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಇದಕ್ಕಾಗಿ ಪೇತ್ರಿಯ ಪ್ರಾಥಮಿಕ ಆಸ್ಪತ್ರೆಯ ವೈದ್ಯರ ಬಳಿ ತೋರಿಸಿ ಔಷಧಿ ತೆಗೆದುಕೊಂಡು ಬಂದಿದ್ದರು. ಬಳಿಕ ಬಿಡಾರಕ್ಕೆ ಬಂದು ಹಾಲನ್ನು ಕುಡಿಸಿ ಮಾತ್ರೆ ತಿನ್ನಿಸಿ ಮಲಗಿಸಿದ್ದರು. ಆ ಬಳಿಕ ಮಧ್ಯಾಹ್ನ 3:00 ಗಂಟೆಯ ಸಮಯಕ್ಕೆ ಖುಷಿಯು ತೀರಾ ಅಸ್ವಸ್ಥಗೊಂಡಿದ್ದು, ಅವಳನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಲ್ಲಿ ಪರೀಕ್ಷಿಸಿದ ವೈದ್ಯರು ಖುಷಿ ಈಗಾಗಲೆ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ರಾಜ್ ಕುಮಾರ್ ಅವರು ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!