ಕೇಂದ್ರದ ವಿದೇಶಾಂಗ ಸಚಿವ ಸುಬ್ರಹ್ಮಣ್ಯಮ್ ಜೈ ಶಂಕರ್ ಶ್ರೀ ಕೃಷ್ಣ ಮಠಕ್ಕೆ ಭೇಟಿ
ಉಡುಪಿ: ಕೇಂದ್ರದ ವಿದೇಶಾಂಗ ಸಚಿವ ಎಸ್. ಜಯಶಂಕರ್ ಇವರು ಇಂದು ಉಡುಪಿ ಶ್ರೀ ಕೃಷ್ಣನ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಮಾಡಿದರು.
ತದನಂತರ ಪರ್ಯಾಯ ಶ್ರೀಕೃಷ್ಣಾಪುರ ಮಠ ಪೀಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದಂಗಳವರಿಂದ ಶ್ರೀಕೃಷ್ಣ ಅನುಗ್ರಹ ಪ್ರಸಾದ ಸ್ವೀಕರಿಸಿದರು.
ಮಠದ ದಿವಾನರಾದ ವರದರಾಜ್ ಭಟ್ ಸಚಿವರನ್ನು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ವಕ್ತಾರ ಕೆ ರಾಘವೇಂದ್ರ ಕಿಣಿ, ಪೂರ್ಣಿಮಾ ಸುರೇಶ್, ವಿಷ್ಣು ಪ್ರಸಾದ್ ಪಾಡಿಗಾರ, ಜಿಲ್ಲಾ ಮಾಧ್ಯಮ ಸಂಚಾಲಕರಾದ ಶ್ರೀನಿಧಿ ಹೆಗ್ಡೆ ಬಿಜೆಪಿ ಪ್ರಭುದ್ಧರ ಪ್ರಕೋಷ್ಠದ ಪಾಂಡುರಂಗ ಲಾಗ್ವಂಕರ್ ಉಪಸ್ಥಿತರಿದ್ದರು.