ಬೆಳ್ತಂಗಡಿ: ಲಾಯಿಲದ ವಿವಾಹಿತೆ ಮಂಗಳೂರಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ಲಾಯಿಲದ ವಿವಾಹಿತೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಲಾಯಿಲ ಹೊಸಕುಮೇರು ನಿವಾಸಿ ರಾಮದಾಸ್ ಅವರ ಪುತ್ರಿ ಯಶಸ್ವಿನಿ ಆತ್ಮಹತ್ಯೆಗೆ ಶರಣಾದವರು.

ಯಶಸ್ವಿನಿ ಅವರನ್ನು ಮಂಗಳೂರಿನ ಯುವಕನಿಗೆ ಮದುವೆ ಮಾಡಿಕೊಡಲಾಗಿತ್ತು. ಅವರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!