ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ

ಉಡುಪಿ: ಜಾತ್ಯತೀತ ಜನತಾದಳ(ಜೆಡಿಎಸ್) ಉಡುಪಿ ಜಿಲ್ಲೆಯಲ್ಲಿ ಐದು ವಿಧಾನ ಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಉಡುಪಿ- ದಕ್ಷತ್ ಆರ್ ಶೆಟ್ಟಿ, ಕಾಪು- ಸಬೀನಾ ಸಮದ್, ಕಾರ್ಕಳ- ಶ್ರೀಕಾಂತ್ ಕೊಚ್ಚೂರು, ಕುಂದಾಪುರ- ರಮೇಶ ಕುಂದಾಪುರ, ಬೈಂದೂರು- ಮನ್ಸೂರ್ ಇಬ್ರಾಹಿಂ ಇವರನ್ನು ಆಯ್ಕೆ ಮಾಡಿದೆ.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಅವರು ಇಂದು ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಿದರು. 

ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದಿಂದ ಎಚ್‌.ಪಿ ಸ್ವರೂಪ್‌ ಅವರನ್ನು ಕಣಕ್ಕಿಳಿಸಲಾಗುತ್ತಿದ್ದು, ಶಾಸಕ ಎಚ್‌.ಡಿ ರೇವಣ್ಣ ಪತ್ನಿ ಭವಾನಿಗೆ ನಿರಾಶೆಯಾಗಿದೆ. 

ಪಟ್ಟಿ ಪ್ರಕಟಣೆಗೂ ಮುನ್ನ ಎಚ್‌.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿರುವ ಪಕ್ಷದ ಕೇಂದ್ರ ಕಚೇರಿ ಜೆ.ಪಿ ಭವನದಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ ರೇವಣ್ಣ ಅವರೂ ಉಪಸ್ಥಿತರಿದ್ದರು.  

Leave a Reply

Your email address will not be published. Required fields are marked *

error: Content is protected !!