ಬ್ಯಾಂಕಿನ ಭದ್ರತಾ ಸಿಬ್ಬಂದಿಗಳಿಬ್ಬರಿಗೆ ಗುಂಡಿಕ್ಕಿ ಹತ್ಯೆಗೈದು 13. 28 ಲಕ್ಷ ರೂ.ದರೋಡೆ
ಸರಕಾರಿ ಸ್ವಾಮ್ಯದ ಬ್ಯಾಂಕ್ ಶಾಖೆಯ ಇಬ್ಬರು ಭದ್ರತಾ ಕಾವಲುಗಾರರನ್ನು ಗುಂಡಿಕ್ಕಿ ಹತ್ಯೆಗೈದ ಶಸ್ತ್ರಸಜ್ಜಿತ ದುಷ್ಕರ್ಮಿಗಳು 13.28 ಲ.ರೂ.ಗಳನ್ನು ದೋಚಿ ಪರಾರಿಯಾಗಿದ್ದಾರೆ.
ಭಧ್ರತಾ ಸಿಬ್ಬಂದಿಗಳಾದ ಗಣೇಶ್ ಶಾ ಮತ್ತು ರಾಮನರೇಶ್ ರಾಯ್ ಮೃತ ವ್ಯಕ್ತಿಗಳಾಗಿದ್ದಾರೆ.
ಗುರುವಾರ ಮಧ್ಯಾಹ್ನ 12:30ರ ಸುಮಾರಿಗೆ ಐವರು ಅಪರಿಚಿತ ವ್ಯಕ್ತಿಗಳು ಬ್ಯಾಂಕ್ ಶಾಖೆಗೆ ನುಗ್ಗಿದ್ದರು. ಭದ್ರತಾ ಕಾವಲುಗಾರರು ತಡೆದಾಗ ಅವರಿಗೆ ಗುಂಡಿಕ್ಕಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭ ಅವರಿಬ್ಬರೂ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.
ಆರೋಪಿಗಳ ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.