ಬಾಬುರಾವ್ ಚಿಂಚನಸೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕಲಬುರ್ಗಿ: ಮಾಜಿ ಸಚಿವ, ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಬಾಬುರಾವ್ ಚಿಂಚನಸೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಅವರು ಗಾಯಗೊಂಡ ಘಟನೆ ನಡೆದಿದೆ.

ತಡರಾತ್ರಿ 1ರ ಸುಮಾರಿಗೆ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ‌. ಬಾಬುರಾವ್ ಚಿಂಚನಸೂರು ಕಾಲು, ಮುಖಕ್ಕೆ ಗಾಯವಾಗಿದೆ. ಕೂಡಲೇ ಅವರನ್ನು ಕಲಬುರಗಿಯ ಯನೈಟೆಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾದಗಿರಿಯಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಾರು ಗುಂಡಿಗೆ ಬಿದ್ದು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಅಪಘಾತದಲ್ಲಿ ಚಾಲಕ, ಗನ್ ಮ್ಯಾನ್ ಗೆ ಯಾವುದೇ ಗಾಯವಾಗಿಲ್ಲ. ಸದ್ಯ ಬಾಬುರಾವ್ ಚಿಂಚನಸೂರು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!