ಉಡುಪಿ: ಏ.17 ರಂದು ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ ನಾಮಪತ್ರ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‌ನ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ಪಕ್ಷೇತರವಾಗಿ ಏ.17ರಂದು ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ.

ಉಡುಪಿ ಕ್ಷೇತ್ರದ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ಅವರೊಂದಿಗೆ ಕಾಂಗ್ರೆಸ್‌ ಮುಖಂಡರಾದ ರೋಜಿ ಜಾನ್, ಬಿ.ಕೆ. ಹರಿಪ್ರಸಾದ್‌ ಸೇರಿದಂತೆ ಜಿಲ್ಲಾಧ್ಯಕ್ಷರು ಮತ್ತು ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಪಕ್ಷದಲ್ಲಿ ತನಾಗದ ನಿರಂತರ ಅನ್ಯಾಯದ ಬಗ್ಗೆ ಈ ನಾಯಕರಲ್ಲಿ ತೊಡಿಕೊಂಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಪಕ್ಷವು ತಮ್ಮ ಜೊತೆ ಇರುತ್ತದೆ ಎನ್ನುವ ಭರವಸೆಗೂ ಕೃಷ್ಣಮೂರ್ತಿ ಆಚಾರ್ಯ ಜಗ್ಗಲಿಲ್ಲ ಎಂದುತಿಳಿದುಬಂದಿದೆ.

ಆದರೂ, ಕೃಷ್ಣಮೂರ್ತಿ ಆಚಾರ್ಯ ತಮ್ಮ ನಿರ್ಧಾರವನ್ನು ಬದಲಿಸದೆ, ಏ.17 ರಂದು ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!