ಉಡುಪಿ: ಕಾಂಗ್ರೆಸ್’ನ ಬಂಡಾಯ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ ನಾಮಪತ್ರ ಸಲ್ಲಿಕೆ
ಉಡುಪಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಷ್ಣಮೂರ್ತಿ ಆಚಾರ್ಯ ಅವರು ಇಂದು ಉಡುಪಿ ವಿಧಾನಸಬಾ ಕ್ಚೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಕೃಷ್ಣಮೂರ್ತಿ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕಟ್ ಆಕಾಂಕ್ಷಿಯಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ಕೃಷ್ಣಮೂರ್ತಿ ಅವರಿಗೆ ಟಿಕಟ್ ತಪ್ಪಿತ್ತು. ಉಡುಪಿ ಕನ್ನರ್ಪಾಡಿಯ ಜಯದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬೃಹತ್ ಪಾದಯಾತ್ರೆಯ ಮೂಲಕ ಉಡುಪಿ ತಾಲ್ಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಉಡುಪಿ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಕೂಡಾ ಕಾರ್ಯಕರ್ತರೊದಿಗೆ ಆಗಮಿಸಿದ್ದು ಇರ್ವರೂ ಕೂಡಾ ಮುಖಾಮುಖಿಯಾಗಿದ್ದು ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು. ಪರಿಸ್ಥಿತಿಯನ್ನು ಈ ಮೊದಲೇ ಅರಿತಿದ್ದ ಪೋಲಿಸರು ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿದ್ದರು. ಈ ಸಂದರ್ಭದಲ್ಲಿ ಕೆಲಕಾಲ ಘೋಷಣೆ-ಪ್ರತಿ ಘೋಷಣೆಗಳು ಕಾರ್ಯಕರ್ತರಿಂದ ನಡೆದವು.