ಮಂಗಳೂರು:ಪುಟ್ಬಾಲ್ ಮೈದಾನದಲ್ಲಿ ವ್ಯಕ್ತಿಯ ಹತ್ಯೆಗೈದ ಸ್ಥಿತಿಯಲ್ಲಿ ಮೃತ ದೇಹ ಪತ್ತೆ
ಮಂಗಳೂರು: ನಗರದ ನೆಹರೂ ಮೈದಾನದ ಬಳಿಯ ಪುಟ್ಬಾಲ್ ಮೈದಾನದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಅವರ ಕೊಲೆ ನಡೆದಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ಅಮ್ಮುಂಜೆ ಯಾದವ ನಿವಾಸದ ಜನಾರ್ದನ ಪೂಜಾರಿ (45) ಮೃತ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದಾರೆ. ಮೃತದೇಹವನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಮೃತದೇಹದಲ್ಲಿ ಯಾವುದೇ ಗಾಯಗಳು ಪತ್ತೆಯಾಗಿಲ್ಲ. ಜನಾರ್ದನ ಅವರ ಜತೆ ನಾಲ್ವರು ಜಗಳವಾಡಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೋಲಿಸ್ ಅಧಿಕಾರಿ ತಿಳಿಸಿದ್ದಾರೆ.