ನೀತಿ ಸಂಹಿತೆ ಉಲ್ಲಂಘನೆ: ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

ಕಾಪು ಎ.19 (ಉಡುಪಿ ಟೈಮ್ಸ್ ವರದಿ): ಚುನವಣೆ ಹಿನ್ನೆಯಲ್ಲಿ ಜಾರಿ ಮಾಡಿರುವ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವುದಾಗಿ ಕಾಪು ಬ್ಲಾಕ್ ಕಾಂಗ್ರೇಸ್ ದಕ್ಷಿಣ ಇದರ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಅವರ ವಿರುದ್ಧ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ.

ಫ್ಲೈಯಿಂಗ್ ಸ್ಕ್ವಾಟ್ ತಂಡದ ಅಧಿಕಾರಿಗಳು ಚುನಾವಣೆ ನಿಮಿತ್ತ ಕಾಪುವಿನಲ್ಲಿ ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಮಧ್ಯಾಹ್ನದ ವೇಳೆ ಜಿಲ್ಲಾಧಿಕಾಗಳ ಕಛೇರಿ ಚುನಾವಣಾ ವಿಭಾಗದಿಂದ ಬಂದ ದೂರಿನಂತೆ ಈ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅದರಂತೆ ಕಾಂಗ್ರೇಸ್ ಪಕ್ಷದ ವತಿಯಿಂದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಲುವಾಗಿ ಆಯೋಜಿಸಿದ ರ್ಯಾಲಿ ಬಳಿಕ ಕಾಪುವಿನಲ್ಲಿರುವ ರಾಜೀವ ಸಭಾ ಭವನದಲ್ಲಿ ನಡೆದ ಜಾಥದಲ್ಲಿ ಭಾಗವಹಿಸಿದ ಕಾರ್ಯಕರ್ತರಿಗೆ ಚುನಾವಣಾಧಿಕಾರಿ 121- ಕಾಪು ವಿಧಾನ ಸಭಾ ಕ್ಷೇತ್ರ ಇವರಿಂದ ಅನುಮತಿಯನ್ನು ಪಡೆಯದೇ ಸುಮಾರು 1000 ಜನರಿಗೆ ಭೋಜನ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿ ಪಕ್ಷದ ಕಾರ್ಯಕರ್ತರಿಗೆ ವಿತರಿಸುತ್ತಿದ್ದು ಕಂಡು ಬಂದಿದ್ದು, ಜಾಥ ನಡೆಸಲು ಅನುಮತಿ ಪಡೆದುಕೊಂಡ ಕಾಪು ಬ್ಲಾಕ್ ಕಾಂಗ್ರೇಸ್ ದಕ್ಷಿಣ ಇದರ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ವವರ ಮೇಲೆ ಚುನಾವಣಾ ನೀತಿ ಸಂಹಿತೆ  ಉಲ್ಲಂಘನೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ನೀಡಿದ ದೂರಿನಲ್ಲಿ ಸೂಚಿಸಲಾಗಿದೆ. 

Leave a Reply

Your email address will not be published. Required fields are marked *

error: Content is protected !!