ಉಡುಪಿ: ಪೇರಳೆ ಹಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಯುವತಿಯ ರಕ್ಷಣೆ
ಉಡುಪಿ ಬೈಲೂರಿನ ಬಡಗುಬೆಟ್ಟು ಪರಿಸರ ನಿವಾಸಿ ಸಂಜೆ ಸುಮಾರು 6 ಗಂಟೆಗೆ ಮನೆಯ ಸಮೀಪ ಮರದಲ್ಲಿ ಪೇರಳೆ ಹಣ್ಣು ತೆಗೆಯಲು ಮರಕ್ಕೇರಿದ ಯುವತಿ ಕಾಲು ಜಾರಿ ಬಾವಿಗೆ ಬಿದ್ದ ಘಟನೆ ನಡೆದಿದೆ.
ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೂಡಲೇ ಜಾಗೃತರಾಗಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಯುವತಿಗೆ ಅಲ್ಪ ಸ್ವಲ್ಪ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಕ್ಷಣಾ ಕಾರ್ಯದಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿಗಳಾದ ಸತೀಶ್ ಎನ್, ರಾಘವೇಂದ್ರ ಆಚಾರಿ ಸಿಬ್ಬಂದಿಗಳು ಇದ್ದರು.