ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ- ಬಿಜೆಪಿ ಕಾಲೆಳೆದ ಕಾಂಗ್ರೆಸ್!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಐದು ಗ್ಯಾರಂಟಿಗಳ ಜಾರಿಗೆ ಘೋಷಣೆ ಮಾಡಿದ್ದು, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ ಎಂದು ಕಾಂಗ್ರೆಸ್ ಹೇಳುವ ಮೂಲಕ ಬಿಜೆಪಿಯ ಕಾಲೆಳೆದಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ನುಡಿದಂತೆ ನಡೆಯುವವರು, ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ಹೇಳಿದೆ.

ನಳಿನ್ ಕುಮಾರ್ ಕಟೀಲ್ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ, ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ, ಶೋಭಾ ಕರಂದ್ಲಾಜೆ ಅವರೇ ನಿಮಗೂ ಪ್ರಯಾಣ ಫ್ರೀ, ಸಿ.ಟಿ ರವಿ ಅವರೇ ನಿಮ್ಮ ಮನೆಯವರಿಗೂ ರೂ.2,000 ಫ್ರೀ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!