ನುಡಿದಂತೆ ನಡೆದ ಕಾಂಗ್ರೆಸ್ ಸರಕಾರ- ರಮೀಜ್ ಹುಸೇನ್

ಪಡುಬಿದ್ರಿ: ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯ ಮಾತನ್ನು ಈಡೇರಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರಿಗೆ ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಅಭಿನಂದನೆ ಸಲ್ಲಿಸಿದ್ದಾರೆ.

ಗ್ಯಾರಂಟಿ ಜಾರಿಗಳನ್ನು ಯಾವುದೇ ಜಾತಿ, ಧರ್ಮಗಳ ತಾರತಮ್ಯ ಇಲ್ಲದೇ ಗ್ಯಾರಂಟಿ ಯೋಜನೆ ಜಾರಿ ಗೊಳಿಸಿದ್ದಲ್ಲದೇ ಸಮಾನ್ಯ ಜನರಿಗೆ ಆಸರೆಯನ್ನು ನೀಡಿದೆ. ಜನ ಸಮಾನ್ಯರು ಬೆಲೆ ಏರಿಕೆ ಹಾಗು ಯುವ ಜನತೆ ನಿರುದ್ಯೋಗದ ಸಮಸ್ಯೆಯಿಂದ ತತ್ತರಿಸಿರುವ‌ ಈ ಸಂದರ್ಭದಲ್ಲಿ ಜನರ ಬದುಕಿಗೆ ಅಸರೆ ನೀಡಿದ‌ ಕಾಂಗ್ರೆಸ್ ‌ಸರಕಾರದ ಈ ಸಾಧನೆ ನಿಜವಾಗಿ ಯು ಶಾಘ್ಲನೀಯ..‌ ಜನರ ಕಷ್ಟಕ್ಕೆ ಸ್ಪಂದಿಸುವ ‌ಸರಕಾರ ಎಂಬುದನ್ನು ಕಾಂಗ್ರೆಸ್ ಪಕ್ಷದ ‌ಸರಕಾರ ಸಾಬೀತು ಪಡಿಸಿದೆ.

Leave a Reply

Your email address will not be published. Required fields are marked *

error: Content is protected !!