ಉಡುಪಿ: ಜು.23 ರಂದು ಸೌಜನ್ಯಾ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಉಡುಪಿ: ಧರ್ಮಸ್ಥಳದ ಸೌಜನ್ಯಾಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನ್ಯಾಯ ಬದ್ಧ ಮೂಲ ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಜುಲೈ 23 ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಅಂಬೇಡ್ಕರ್ ಯುವಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಹರೀಶ್ ಸಾಲ್ಯಾನ್ ಮತ್ತು ದಯಾನಂದ ಕಪ್ಪೆಟ್ಟು ತಿಳಿಸಿದ್ದಾರೆ.
ಉಡುಪಿಯ ಸರ್ವಿಸ್ ಬಸ್ಸ್ ನಿಲ್ದಾಣ ಸಮೀಪದ ಬೋರ್ಡ್ ಹೈಸ್ಕೂಲ್ ಬಳಿ ಬೆಳಿಗ್ಗೆ 10.30ಕ್ಕೆ ನಡೆಯುವ ಈ ಪ್ರತಿಭಟನೆಯಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯ ಹೈಕೋರ್ಟ್ ವಕೀಲರಾದ ಶ್ರೀನಿವಾಸ್, ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ, ಬೆಳ್ತಂಗಡಿಯ ಪ್ರಗತಿಪರ ಹೋರಾಟಗಾರ ಶೇಖರ್ ಲಾಯಿಲ,ಚಿಂತಕ ಶ್ರೀರಾಮ ದಿವಾಣ ಹಾಗೂ ಇತರ ಬುದ್ಧಿಜೀವಿಗಳು ಭಾಗವಹಿಸುವರು ಎಂದು ತಿಳಿಸಿದ್ದಾರೆ.
ಕಳೆದ 11 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾಗಲ್ಪಟ್ಟ ಅಪ್ರಾಪ್ತ ಬಾಲಕಿ ಸೌಜನ್ಯಾಳ ಪ್ರಕರಣದ ಆರೋಪಿ ಎಂದು ಬಿಂಬಿಸಲ್ಪಟ್ಟಿದ್ದ ಸಂತೋಷ್ರಾವ್ ಎಂಬವರನ್ನು ನಿರ್ದೋಸಿ ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಹಾಗಾದರೆ ನಿಜವಾದ ಆರೋಪಿಗಳು ಯಾರು ಎಂದು ಪತ್ತೆಹಚ್ಚಲು ಈ ಪ್ರಕರಣವನ್ನು ಮರುತನಿಖೆಗೆ ಆಗ್ರಹಿಸಿ ಸರಕಾರಕ್ಕೆ ಒತ್ತಾಯಿಸಲಾಗುವುದು ಎಂದು ಹರೀಶ್ ಸಲ್ಯಾನ್ ಮತ್ತು ದಯಾನಂದ ಕಪ್ಪೆಟ್ಟು ತಿಳಿಸಿದ್ದಾರೆ.