ಆಗುಂಬೆ ಘಾಟಿ ಭಾರಿ ವಾಹನ ಸಂಚಾರ ನಿಷೇಧ- ಜಿಲ್ಲಾಧಿಕಾರಿ ಆದೇಶ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ- ಉಡುಪಿ ರಸ್ತೆಯ ಆಗುಂಬೆ ಘಾಟಿಯ 6,7 ಹಾಗೂ 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತವು ಕಂಡುಬಂದಿದ್ದು, ಹೆಚ್ಚಿನ ಮಳೆಯಿಂದಾಗಿ ತಡೆಗೋಡೆ ಕುಸಿದಿರುವುದು ಕಂಡು ಬಂದಿದ್ದು, ಈ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ಸೂಕ್ತವಲ್ಲ ಹಾಗೂ ಇದರಿಂದ ರಸ್ತೆ ಮತ್ತಷ್ಟು ಕುಸಿದು ಅಪಘಾತವಾಗುವ ಸಂಭವವಿರುವುದರಿಂದ ತಾತ್ಕಾಲಿಕವಾಗಿ ತಕ್ಷಣದಿಂದ ದಿನಾಂಕ:27-07-2023 ರಿಂದ 15-09-2023 ರವರೆಗೆ ಸದರಿ ರಸ್ತೆಯಲ್ಲಿ ಭಾರೀ ವಾಹನಗಳ ವಾಹನ ಸಂಚಾರ ನಿಷೇಧಿಸಿ ಈ ಕೆಳಕಂಡ ಮಾರ್ಗಗಳಲ್ಲಿ ಸಂಚರಿಸಲು ಆದೇಶ ಹೊರಡಿಸುವಂತೆ ಕೋರಲಾಗಿದೆ ಆದೇಶಿಸಿದೆ.

ಬದಲೀ ಮಾರ್ಗ:- ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ

ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ-ಉಡುಪಿ

Leave a Reply

Your email address will not be published. Required fields are marked *

error: Content is protected !!